ಗುಡ್ ನ್ಯೂಸ್

ಅಭಿವೃದ್ಧಿ ಪರ್ವ ಮುಂದುವರಿಸಿದ ಲಕ್ಷ್ಮಿ ಹೆಬ್ಬಾಳಕರ್;ಕಾಮಗಾರಿ ಪ್ರಗತಿ ಪರಿಶೀಲಿಸಿದ ಮೃಣಾಲ್

ಬೆಳಗಾವಿ:ಬೆಳಗಾವಿಯ ಬಿ‌ಕೆ ಕಂಗ್ರಾಳಿಯಲ್ಲಿರುವ ಕೆರೆಯನ್ನು ಅಭಿವೃದ್ಧಿ ಪಡಿಸುವ ಮೂಲಕ ಮತ್ತೇ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಅಭಿವೃದ್ಧಿ ಪರ್ವ ಮುಂದುವರೆಸಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ.

ಲಕ್ಷ್ಮಿ ಹೆಬ್ಬಾಳಕರ್ ಅವರು ಶಾಸಕರಾಗಿ ಆಯ್ಕೆ ಆದ ನಂತರ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಸ್ತೆಗಳ ಅಭಿವೃದ್ಧಿ, ಚರಂಡಿಗಳ ನಿರ್ಮಾಣ, ಬಿದಿ ಕಂಬಗಳ ಅಳವಡಿಕೆ, ಉದ್ಯಾನಗಳ ಬೆಳವಣಿಗೆ ಸೇರಿ ಹೀಗೆ ಹತ್ತು ಹಲವವಾರು ಅಭಿವೃದ್ಧಿ ಕೆಲಸಗಳ ಜೊತೆ ಜನರಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ನೀಡಿ, ಕ್ಷೇತ್ರದ ಜನರ ಮೇಚ್ಚುಗೆಗೆ ಪಾತ್ರರಾಗಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಸಧ್ಯ ಕರೋನಾ ಸೋಂಕು ದೃಢಪಟ್ಟಿರುವ ಹಿನ್ನೇಲೆಯಲ್ಲಿ ಅವರು ಪ್ರಾರಂಭಿಸಿರುವ ಅಭಿವೃದ್ಧಿಯ ಕೆಲಸವನ್ನು ಅವರ ಮಗ ಮೃಣಾಲ ಹೆಬ್ಬಾಳಕರ್ ಅವರು ನೋಡಿಕೊಳ್ಳುತ್ತಿದ್ದು, ಇಂದು ಬಿಕೆ ಕಂಗ್ರಾಳಿ ಗ್ರಾಮಕ್ಕೆ ಭೇಟಿ ನೀಡಿದ, ಮೃಣಾಲ ಹೆಬ್ಬಾಳಕರ್, ಒಂದು ಕೋಟಿ ಇಪ್ಪತ್ತು ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರು ಕೆರೆಯ ಅಭಿವೃದ್ಧಿ ಮತ್ತು ಸೌಂದರ್ಯೀಕರಣದ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ್ದಾರೆ

ಕ್ಷೇತ್ರದ ಕೆರೆಗಳ ಅಭಿವೃದ್ಧಿಗೆ ಮಹತ್ವ ನೀಡಿರು ಲಕ್ಷ್ಮಿ ಹೆಬ್ಬಾಳಕರ್ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬರುವ ವೈಭವ ನಗರದಲ್ಲಿರು ಕೆರೆಯ ಅಭಿವೃದ್ಧಿ, ಬಿಕೆ ಕಂಗ್ರಾಳಿಯ ಕೆರೆಯ ಜೊತೆಗೆ ಹಲವಾರು ಕೆರೆಗಳ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!